9th Standard Adarsha Shikshaka Sarvepalli Radhakrishnan Kannada Notes | 9ನೇ ತರಗತಿ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ ಕನ್ನಡ ನೋಟ್ಸ್

9ನೇ ತರಗತಿ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ Notes, Adarsh Shikshak Sarvepalli Radhakrishnan Notes Question Answer Pdf Download

ತರಗತಿ : 9ನೇ ತರಗತಿ

ಪಾಠದ ಹೆಸರು : ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ 

9ನೇ ತರಗತಿ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ ಕನ್ನಡ ನೋಟ್ಸ್

Table of Contents

ಕೃತಿಕಾರರ ಪರಿಚಯ :

ಪ್ರಕೃತ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ ವ್ಯಕ್ತಿಚಿತ್ರ ಗದ್ಯ ಭಾಗವನ್ನು ಕೆ . ಎಸ್ , ರತ್ನಮ್ಮ ಅವರ ಡಾ . ಎಸ್ . ರಾಧಾಕೃಷ್ಣನ್ – ಜೀವನ ಸಾಧನೆ ಮತ್ತು ಎ.ಎನ್ . ಮೂರ್ತಿರಾವ್ ಅವರ ಚಿತ್ರಗಳು – ಪತ್ರಗಳು ಕೃತಿಗಳ ಆಧಾರದಿಂದ ಪಠ್ಯಪುಸ್ತಕ ರಚನಾ ಸಮಿತಿ ಸಿದ್ಧಪಡಿಸಿ , ನಿಗದಿ ಮಾಡಿದೆ .

ಅ ] ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ ,

1. ರಾಷ್ಟ್ರಪತಿಗಳಾಗಿ ಪಡೆಯುತ್ತಿದ್ದ ವೇತನವನ್ನು ರಾಧಾಕೃಷ್ಣನ್ ಅವರು ಹೇಗೆ ಸದುಪಯೋಗಪಡಿಸಿಕೊಂಡರು ?

ಉತ್ತರ : ರಾಧಾಕೃಷ್ಣನ್ ಅವರಿಗೆ ಬರುತ್ತಿದ್ದ ಹತ್ತು ಸಾವಿರ ರೂಪಾಯಿಗಳ ವೇತನದಲ್ಲಿ ಎರಡು ಸಾವಿರದ ಐನೂರು ರುಪಾಯಿಗಳನ್ನು ಮಾತ್ರ ಪಡೆದು , ಉಳಿದ ಹಣವನ್ನು ಪಧಾನಮಂತ್ರಿಗಳ ಪರಿಹಾರನಿಧಿಗೆ ವಂತಿಗೆಯಾಗಿ ನೀಡುತ್ತಿದ್ದರು.

2. ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಯಾವ ಹೆಸರಿನಿಂದ ಆಚರಿಸಲಾಗುತ್ತಿದೆ ?

ಉತ್ತರ : ರಾಧಾಕೃಷ್ಣನ್ ಅವರ ಜನ್ಮದಿನವನ್ನು ‘ ರಾಷ್ಟ್ರೀಯ ಶಿಕ್ಷಕರ ದಿನ ‘ ಎಂಬ ಹೆಸರಿನಿಂದ ಆಚರಿಸಲಾಗುತ್ತದೆ .

3. ರಾಧಾಕೃಷ್ಣನ್ ಅದರ ತಂದೆತಾಯಿಯರ ಹೆಸರೇನು ?

ಉತ್ತರ : ರಾಧಾಕೃಷ್ಣನ್ ಅವರ ತಂದೆ ವೀರಸ್ವಾಮಿ , ತಾಯಿ ಸೀತಮ್ಮ ,

4. ರಾಧಾಕೃಷ್ಣನ್ ಅವರ ತಂದೆಯ ಅಪೇಕ್ಷೆ ಏನಾಗಿತ್ತು ?

ಉತ್ತರ : ದೇಶೀ ಭಾಷೆಯಾಗಿದ್ದ ಸಂಸ್ಕೃತವನ್ನು ಕಲಿಯಲಿ ಎಂಬುದು ರಾಧಾಕೃಷ್ಣನ್ ಅವರ ತಂದೆಯ ಅಪೇಕ್ಷೆಯಾಗಿತ್ತು .

ಆ ] ಕೊಟ್ಟಿರುವ ಪ್ರಶ್ನೆಗಳಿಗೆ ಮೂರು – ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ .

1. ರಾಧಾಕೃಷ್ಣನ್ ಅವರ ವಿದ್ಯಾಭ್ಯಾಸ ಎಲ್ಲೆಲ್ಲಿ ನಡೆಯಿತು ?

ಉತ್ತರ : ರಾಧಾಕೃಷ್ಣನ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ತಿರುಪತಿಯ ಹರ್ಮನ್ಸ್ ಬರ್ಗ್ ಮಿಷನರಿ ಶಾಲೆಯಲ್ಲಿ , ಅಲ್ಲಿ ಮುಗಿಸಿದರು . ವೆಲ್ಲೂರಿನ ವೂರ್ ಕಾಲೇಜಿನಲ್ಲಿ ಬಿ . ಎ . ಪೂರ್ವದ ಎರಡು ವರ್ಷಗಳ ಕಲಾ ಪದವಿ ಮುಗಿಸಿದರು . ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಬಿ.ಎ. ಪದವಿಗೆ ಸೇರಿದರಲ್ಲದೆ ತತ್ವಶಾಸ್ತ್ರದ ಉತ್ತಮ ವಿದ್ಯಾರ್ಥಿ ಎನಿಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು .

2. ಸ್ಟಾಲಿನ್ ಅವರು ರಾಧಾಕೃಷ್ಣನ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಏನು ಹೇಳಿದರು ?

ಉತ್ತರ : “ ನೀವೊಬ್ಬರೇ ನನ್ನನ್ನು ಒಬ್ಬ ಮನುಷ್ಯನಂತೆ ಕಂಡು ವರ್ತಿಸಿದವರು . ನೀವು ನಮ್ಮನ್ನು ಬಿಟ್ಟು ಹೋಗುತ್ತಿರುವಿರಿ . ನನಗೆ ಇದು ದುಃಖ ನೀಡಿದೆ . ನೀವು ಹೆಚ್ಚು ಕಾಲ ಬಾಳಬೇಕೆಂಬುದೇ ನನ್ನಾಸೆ , ನಾನು ಹೆಚ್ಚು ಕಾಲ ಬಾಳುವುದಿಲ್ಲ ” ಎಂದು ಸ್ಟಾಲಿನ್ ಅವರು ರಾಧಾಕೃಷ್ಣನ್ ಅವರಿಗೆ ಮಾಸ್ಕೋದಲ್ಲಿ ನೀಡಿದ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದರು .

3. ಶಿಕ್ಷಣದ ಮಹತ್ತ್ವವನ್ನು ಕುರಿತು ರಾಧಾಕೃಷ್ಣನ್ ಅವರು ಏನು ಹೇಳಿದ್ದಾರೆ ?

ಉತ್ತರ : ರಾಧಾಕೃಷ್ಣನ್ ಅವರು ಶಿಕ್ಷಣದ ಮಹತ್ವವನ್ನು ಕುರಿತು “ ಶಿಕ್ಷಣವು ಜೀವನದ ಅವಿಭಾಜ್ಯ ಅಂಗ , ಅದು ಮಾನವನನ್ನು ಪರಿಪೂರ್ಣತೆ ಹಾಗೂ ಸುಸಂಸ್ಕೃತಿಯತ್ತ ಒಯ್ಯುವ ಸಾಧನ ಮಾರ್ಗ ” ಎಂದು ಹೇಳಿದ್ದಾರೆ .

4. ರಾಧಾಕೃಷ್ಣನ್ ಅವರ ವೇಷಭೂಷಣಗಳ ಬಗ್ಗೆ ಬರೆಯಿರಿ ,

ಉತ್ತರ : ರಾಧಾಕೃಷ್ಣನ್ ಅವರ ಬಾಹ್ಯರೂಪ ಎತ್ತರವಾದ ನಿಲುವು , ಬಿಸ್ಕೆಟ್ ಬಣ್ಣದ ರೇಷ್ಮೆಯ ನಿಲುವಂಗಿ , ಬಿಳಿಯ ಪಂಚೆ ಮತ್ತು ರುಮಾಲು ಇವು ಭಾರತೀಯರೆಲ್ಲರಿಗೂ ಪರಿಚಿತ , ಪ್ರಪಂಚದ ಫ್ಯಾಷನ್ ಎಷ್ಟೇ ಬದಲಾದರೂ ರಾಧಾಕೃಷ್ಣನ್ ತಮ್ಮ ವೇಷಭೂಷಣಗಳನ್ನು ಕೊನೆಯವರೆಗೂ ಜತನವಾಗಿ ಉಳಿಸಿಕೊಂಡಿದ್ದರು .

5. ರಾಧಾಕೃಷ್ಣನ್ ಅವರಿಗೆ ಸಂದ ಪ್ರಶಸ್ತಿ ಪುರಸ್ಕಾರಗಳು ಯಾವುವು ?

ಉತ್ತರ : ರಾಧಾಕೃಷ್ಣನ್ ಅವರ ಸ್ಮರಣೀಯ ಸೇವೆಯನ್ನು ಗುರುತಿಸಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ‘ ಭಾರತರತ್ನ ‘ ವನ್ನು ನೀಡಿ ಗೌರವಿಸಲಾಯಿತು . ಬ್ರಸೆಲ್ಸ್‌ನ ಫ್ರೀ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ , ಭಾರತೀಯ ವಿದ್ಯಾಭವನದ ‘ ಬ್ರಹ್ಮವಿದ್ಯಾಭಾಸ್ಕರ ‘ ‘ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ‘ ಹೀಗೆ ಅವರಿಗೆ ದೇಶ ವಿದೇಶಗಳ ಹಲವಾರು ಪ್ರಶಸ್ತಿ ಪುರಸ್ಕಾರಗಳು ದೊರಕಿದವು .

ಇ ] ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು – ಹತ್ತು ವಾಕ್ಯಗಳಲ್ಲಿ ಉತ್ತರಿಸಿ ,

1. ರಾಧಾಕೃಷ್ಣನ್ ಅವರು ಅಧ್ಯಾಪಕರಾಗಿ ಸಲ್ಲಿಸಿದ ಸೇವೆಯನ್ನು ಕುರಿತು ವಿವರಿಸಿ .

ಉತ್ತರ : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತತ್ತ್ವಶಾಸ್ತ್ರದ ಉಪಪ್ರಾಧ್ಯಾಪಕರಾಗಿ ಹಾಗೂ ಕೋತಾದಲ್ಲಿ ( ಹಿಂದಿನ ಕಲ್ಕತ್ತಾ ) ಪ್ರಾಧ್ಯಾಪಕರಾಗಿ ಸಲ್ಲಿಸಿದ ಸೇವೆ ಸ್ಮರಣೀಯ . ಅಲ್ಲದೆ ಆಂಧ್ರ , ದೆಹಲಿ , ಬನಾರಸ್ ವಿಶ್ವವಿದ್ಯಾಲಯಗಳಲ್ಲಿ ಕುಲಪತಿಯಾಗಿ ಸೇವೆ ಸಲ್ಲಿಸಿ , ಅವುಗಳ ಪುರೋಭಿವೃದ್ಧಿಗೆ ಶ್ರಮಿಸಿದರು . ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲದಲ್ಲೂ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದರು . ರಾಧಾಕೃಷ್ಣನ್ ಅವರ ಬೋಧನಾ ಶೈಲಿ , ನಿರರ್ಗಳತೆ , ವಿಷಯದ ಮೇಲಿನ ಪ್ರಭುತ್ವ ವಿದ್ಯಾರ್ಥಿಗಳನ್ನು ಬಹುಬೇಗ ಆಕರ್ಷಿಸಿತು . ತಮ್ಮ ಪ್ರಾಧ್ಯಾಪಕತ್ವವನ್ನು ಯಾವಾಗಲೆಂದರೆ ಆವಾಗ ಕಳಚಿ ಏರು ಜವ್ವನದ ಯುವಕರಂತೆ ಹಾಸ್ಯ ವಿನೋದಗಳಲ್ಲಿ ತೊಡಗುತ್ತಿದ್ದರು .

2. ಹಿಂದೂ ಧರ್ಮ ಮತ್ತು ತತ್ತ್ವಶಾಸ್ತ್ರದ ಬಗ್ಗೆ ರಾಧಾಕೃಷ್ಣನ್ ಅಭಿಪ್ರಾಯವೇನು ? ವಿವರಿಸಿ ,

ಉತ್ತರ : ರಾಧಾಕೃಷ್ಣನ್ ಅವರು ಹಿಂದೂ ಧರ್ಮದ ತತ್ತ್ವಶಾಸ್ತ್ರ ಮತ್ತು ಸಾಹಿತ್ಯವನ್ನೆಲ್ಲ ಅಧ್ಯಯನ ಮಾಡಿದರು . ಸ್ವಾಮಿ ವಿವೇಕಾನಂದರ ವಿಚಾರಧಾರೆ ಅವರ ಮನವನ್ನು ಆಕರ್ಷಿಸಿತು . ಅವರು “ ಹಿಂದೂ ಧರ್ಮವು ಒಂದು ವೈಚಾರಿಕ ಜೀವನ ಮಾರ್ಗವೆಂದೂ , ನೈತಿಕ ಗುಣಾತ್ಮಕ ವಿಷಯಗಳಿಂದ ಕೂಡಿದ್ದು , ಮಾನವನ ಆಂತರಿಕ ಜೀವನದ ಬಗ್ಗೆ ಪ್ರಾಮುಖ್ಯತೆವುಳ್ಳದ್ದಾಗಿದೆ . ಹಿಂದೂಧರ್ಮವಾಗಲಿ , ವೇದಾಂತವಾಗಲಿ ಅಸತ್ಯವನ್ನು ಹೇಳುವುದಿಲ್ಲ . ಭಾರತೀಯ ಚಿಂತನೆಗಳು ಯಾವುದೋ ವಿಚಿತ್ರ ಮತ್ತು ನಿಗೂಢ ಪರಿಕಲ್ಪನೆಗಳಾಗಿಲ್ಲ . ಜೀವನದ ನಾಡಿಮಿಡಿತಗಳನ್ನು ಸೂಕ್ಷ್ಮ ಮನಸ್ಸಿನ ಚಿಂತನೆಗಳನ್ನು ತಿಳಿಯಪಡಿಸುವುದಾಗಿದೆ ” ಎಂದು ಸರಳವಾಗಿ ಹೇಳಿದರು .

3. ರಾಧಾಕೃಷ್ಣನ್ ಅವರಿಗೆ ಮೈಸೂರಿನಲ್ಲಿ ನೀಡಿದ ಬೀಳ್ಕೊಡುಗೆಯ ವಿಶೇಷತೆಯನ್ನು ಕುರಿತು ವಿವರಿಸಿ ,

ಉತ್ತರ : ರಾಧಾಕೃಷ್ಣನ್ ಅವರು ಕೋತ ವಿಶ್ವವಿದ್ಯಾಲಯದ ತತ್ತ್ವಶಾಸ್ತ್ರ ಪ್ರಾಧ್ಯಾಪಕರಾಗಿ ನೇಮಕಗೊಂಡಾಗ ಮೈಸೂರಿನಿಂದ ಹೊರಟ ದಿನ ಅವರಿಗೆ ಕೊಟ್ಟಂತಹ ವೈಭವದ ಬೀಳ್ಕೊಡುಗೆ ಯಾವ ಚಕ್ರವರ್ತಿಗೂ ದೊರೆತಿರಲಾರದು . ರಾಧಾಕೃಷ್ಣನ್ ಅವರನ್ನು ಮಹಾರಾಜ ಕಾಲೇಜಿನಿಂದ ರೈಲು ನಿಲ್ದಾಣಕ್ಕೆ ಕರೆದೊಯ್ಯುವಾಗ ಸಾರೋಟಿಗೆ ಕುದುರೆಯನ್ನು ಕಟ್ಟಲಿಲ್ಲ . ಸ್ವತಃ ವಿದ್ಯಾರ್ಥಿಗಳೇ ಎಳೆದೊಯ್ದರು . ರಾಧಾಕೃಷ್ಣನ್ ಅವರಿಗಾಗಿ ಕಾದಿರಿಸಿದ್ದ ಕಂಪಾರ್ಟ್‌ಮೆಂಟನ್ನು , ಒರಗುದಿಂಬು ಹಾಗೂ ರತ್ನಗಂಬಳಿಯನ್ನು ಹಾಸಿ ಮಲಗುವ ಸೀಟನ್ನು ನೆಲವನ್ನು ಹೂವಿನಿಂದ ಸುಪ್ಪತ್ತಿಗೆಯಂತೆ ಮಾಡಿ ದೈವಮಂದಿರವನ್ನು ಭಕ್ತರು ಅಲಂಕರಿಸುವಂತೆ ಅಲಂಕರಿಸಲಾಗಿತ್ತು , ” ರಾಧಾಕೃಷ್ಣನ್ ಅವರಿಗೆ ಜಯವಾಗಲಿ ” ಎಂಬ ಕೂಗು ರೈಲ್ವೆ ಸ್ಟೇಷನ್ನಿನ ಆವರಣದಲ್ಲೆಲ್ಲ ಮೊಳಗುತ್ತಿತ್ತು . ಆ ದಿನ ಭಾವೋದ್ರೇಕದಿಂದ ಎಷ್ಟೋ ಜನ ಅತ್ತರು . ವಿದ್ಯಾರ್ಥಿಗಳು ತೋರಿದ ವಿಶ್ವಾಸ ಅವರ ಕಣ್ಣಿನಲ್ಲೂ ನೀರು ತಂದಿತು ,

ಈ ] ಕೊಟ್ಟಿರುವ ವಾಕ್ಯಗಳ ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ .

1 , “ ಆರ್ಥಿಕ ಪರಿಸ್ಥಿತಿ ತಮ್ಮ ಸಾಧನೆಯಲ್ಲಿ ನಿವಾರಿಸಲಾಗದ ತೊಡಕೆಂದು ಭಾವಿಸಲಿಲ್ಲ ”

ಉತ್ತರ : ಆಯ್ಕೆ : ಪಠ್ಯಪುಸ್ತಕ ರಚನಾ ಸಮಿತಿ ಸಿದ್ಧಪಡಿಸಿರುವ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : ರಾಧಾಕೃಷ್ಣನ್ ಅವರು ವಿದ್ಯಾಭ್ಯಾಸ ಮಾಡುತ್ತಿದ್ದಾಗ ಅವರ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿಲ್ಲ . ಆದರೂ ಅದು ಅವರ ಸಾಧನೆಗೆ ಅಡ್ಡಿ ಉಂಟು ಮಾಡಲಿಲ್ಲ . ಮನೆಯ ಜವಾಬ್ದಾರಿ ಹೊತ್ತ ಅವರು ಕಿರಿಯ ಸಹಪಾಠಿಗಳಿಗೆ ಮನೆಯ ಪಾಠ ಹೇಳಿ ಹಣಗಳಿಸುತ್ತಿದ್ದರು . ಬಡತನದಲ್ಲಿದ್ದರೂ ತತ್ತ್ವಶಾಸ್ತ್ರದಲ್ಲಿ ಎಂ.ಎ. ಪದವಿಯನ್ನು ಸ್ವಾರಸ್ಯ : ನಾವು ಮನಸ್ಸು ಮಾಡಿದರೆ ಯಾವ ಅ ಇಲ್ಲಿ ಸ್ವಾರಸ್ಯಪೂರ್ಣವಾಗಿದೆ . ಪಡೆದರು . ಪರಿಸ್ಥಿತಿಯನ್ನು ತೊಡಕೆಂದು ಭಾವಿಸದೆ ಸಾಧನೆ ಮಾಡಬಹುದು ಎಂಬುದು ಅವರು

2. “ ನೀವೊಬ್ಬರೇ ನನ್ನನ್ನು ಒಬ್ಬ ಮನುಷ್ಯನಂತೆ ಕಂಡು ವರ್ತಿಸಿದವರು “

ಉತ್ತರ : ಆಯ್ಕೆ : ಪಠ್ಯಪುಸ್ತಕ ರಚನಾಸಮಿತಿ ಸಿದ್ಧಪಡಿಸಿರುವ ‘ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : ಈ ಮಾತನ್ನು ರಷ್ಯಾದ ಅಧ್ಯಕ್ಷರಾಗಿದ್ದ ಸ್ಟಾಲಿನ್ ಅವರು ರಾಧಾಕೃಷ್ಣನ್ ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಹೇಳಿದರು . ಭಾರತದ ರಾಯಭಾರಿಯಾಗಿದ್ದ ರಾಧಾಕೃಷ್ಣನ್ ಅವರು ಸ್ಟಾಲಿನ್ ಅವರೊಡನೆ ನಡೆದುಕೊಂಡ ರೀತಿಯನ್ನು ಸ್ಮರಿಸುತ್ತಾ ಈ ರೀತಿ ಹೇಳಿದ್ದಾರೆ . ಸ್ವಾರಸ್ಯ : ಸ್ಟಾಲಿನ್ ಅವರ ಈ ಮಾತಿನಲ್ಲಿ ರಾಧಾಕೃಷ್ಣನ್ ಅವರ ಸ್ನೇಹಪರತೆ , ಸನ್ನಡತೆಗಳು ಸ್ವಾರಸ್ಯಪೂರ್ಣವಾಗಿ ವ್ಯಕ್ತವಾಗಿವೆ .

3. “ ಅಶೋಕನು ಕಳಿಂಗ ಯುದ್ಧದ ಅನಂತರ ಶ್ರೇಷ್ಠ ಮನುಷ್ಯನಾದಂತೆ ನೀವೂ ಆಗುವಿರಿ ”

ಉತ್ತರ : ಆಯ್ಕೆ : ಪಠ್ಯಪುಸ್ತಕ ರಚನಾ ಸಮಿತಿ ಸಿದ್ಧಪಡಿಸಿರುವ ‘ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : ರಷ್ಯಾದ ಅಧ್ಯಕ್ಷರಾಗಿದ್ದ ಸ್ಟಾಲಿನ್ ಅವರು ರಾಧಾಕೃಷ್ಣನ್ ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ “ ನೀವೊಬ್ಬರೇ ನನ್ನನ್ನು ಒಬ್ಬ ಮನುಷ್ಯನಂತೆ ಕಂಡು ವರ್ತಿಸಿದವರು ” ಎಂದು ಹೇಳುತ್ತಾ ತಮಗೆ ಪ್ರಥಮ ಭೇಟಿಯಲ್ಲಿ ರಾಧಾಕೃಷ್ಣನ್ ಅವರು ಹೇಳಿದ ಈ ಮಾತನ್ನು ಸ್ಮರಿಸಿದರು . ಸ್ವಾರಸ್ಯ : ರಾಧಾಕೃಷ್ಣನ್ ಅವರು ಪ್ರಥಮ ಭೇಟಿಯ ಮಾತುಗಳಲ್ಲೇ ಸ್ಟಾಲಿನ್ ಅವರ ಮನಗೆದ್ದಿರುವುದು ಇಲ್ಲಿ ಸ್ವಾರಸ್ಯಪೂರ್ಣವಾಗಿದೆ .

4. “ ಮಾನವತೆಯೇ ವಿಶ್ವ ಅನುಸರಿಸಬೇಕಾದ ಮಾರ್ಗ ”

ಉತ್ತರ : ಆಯ್ಕೆ : ಪಠ್ಯಪುಸ್ತಕ ರಚನಾ ಸಮಿತಿ ಸಿದ್ಧಪಡಿಸಿರುವ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : ರಾಧಾಕೃಷ್ಣನ್ ಅವರು ಕೆನಡಾದ ರೇಡಿಯೋ ಭಾಷಣ ಮಾಡುವ ಸಂದರ್ಭದಲ್ಲಿ ಈ ಮಾತನ್ನು ಹೇಳಿದ್ದಾರೆ . ಇಡೀ ವಿಶ್ವದಲ್ಲಿ ಶಾಂತಿ ಸೌಹಾರ್ಧತೆ ನೆಲೆಸಬೇಕಾದರೆ ವಿಶ್ವದ ಪ್ರತಿಯೊಬ್ಬರೂ ಮಾನವತೆಯನ್ನು ಅನುಸರಿಸಬೇಕೆಂದು ಅವರು ತಮ್ಮ ಭಾಷಣದಲ್ಲಿ ಸ್ವಾರಸ್ಯ : ವಿಶ್ವದ ಸರ್ವ ಸಮಸ್ಯೆಗಳಿಗೂ ಮಾನವೀಯತೆ ಇಲ್ಲದಿರುವುದೇ ಕಾರಣ . ಆದ್ದರಿಂದ ಮಾನವೀಯತೆ ಹೊಂದಬೇಕೆಂಬುದು ಇಲ್ಲಿ ಸ್ವಾರಸ್ಯಪೂರ್ಣವಾಗಿದೆ .

5. “ ಏರು ಜವ್ವನದ ಯುವಕರಂತೆ ಹಾಸ್ಯ ವಿನೋದಗಳಲ್ಲಿ ತೊಡಗುತ್ತಿದ್ದರು ”

ಉತ್ತರ : ಆಯ್ಕೆ : ಪಠ್ಯಪುಸ್ತಕ ರಚನಾ ಸಮಿತಿ ಸಿದ್ಧಪಡಿಸಿರುವ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ ‘ ಎಂಬ ಗದ್ಯಭಾಗದಿಂದ ಆರಿಸಿಕೊಳ್ಳಲಾಗಿದೆ . ಸಂದರ್ಭ : ರಾಧಾಕೃಷ್ಣನ್ ಅವರ ಬೋಧನಾ ಶೈಲಿ , ನಿರರ್ಗಳತೆ , ವಿಷಯದ ಮೇಲಿನ ಪ್ರಭುತ್ವ ವಿದ್ಯಾರ್ಥಿಗಳನ್ನು ಬಹುಬೇಗ ಆಕರ್ಷಿಸಿತು . ಎಂದು ವಿವರಿಸುವ ಸಂದರ್ಭದಲ್ಲಿ ಈ ಮಾತನ್ನು ಹೇಳಲಾಗಿದೆ . ರಾಧಾಕೃಷ್ಣನ್ ಅವರು ತಾವು ಪ್ರಾಧ್ಯಾಪಕ ಎಂಬ ಗತ್ತನ್ನು ತೋರದೆ ವಿದ್ಯಾರ್ಥಿಗಳೊಂದಿಗೆ ಏರು ಜವ್ವನದ ಯುವಕರಂತೆ ಹಾಸ್ಯ ವಿನೋದಗಳಲ್ಲಿ ತೊಡಗುತ್ತಿದ್ದರು . ಸ್ವಾರಸ್ಯ : ವಿದ್ಯಾರ್ಥಿಗಳೊಂದಿಗೆ ರಾಧಾಕೃಷ್ಣನ್ ಅವರ ಸ್ನೇಹಪೂರ್ವಕ ಬಾಂಧವ್ಯ , ನಿರಹಂಕಾರ ಮನೋಭಾವ ಇಲ್ಲಿ ಸ್ವಾರಸ್ಯಪೂರ್ಣವಾಗಿ ವ್ಯಕ್ತವಾಗಿದೆ

ಉ ) ಕೊಟ್ಟಿರುವ ಪ್ರತಿಯೊಂದು ಪ್ರಶ್ನೆಗೂ ನೀಡಿರುವ ನಾಲ್ಕು ಆಯ್ಕೆಗಳಲ್ಲಿ ಸೂಕ್ತ ಉತ್ತರವನ್ನು ಆರಿಸಿ ಬರೆಯಿರಿ .

1. ರಾಧಾಕೃಷ್ಣನ್ ಅವರ ಸಾಧನೆಯಲ್ಲಿ ವಿಶೇಷ ಸಹಕಾರ ನೀಡಿದವರು…………………………….

( ತಂದೆ , ತಾಯಿ , ಪತ್ನಿ , ಸಹೋದರಿ )

2.ಮದ್ರಾಸಿನ ಕಿಶ್ಚಿಯನ್ ಶಾಲೆಯಲ್ಲಿ ರಾಧಾಕೃಷ್ಣನ್ ಅವರು ಉತ್ತಮ ವಿದ್ಯಾರ್ಥಿ ಎಂದು ಪರಿಗಣಿಸಲ್ಪಟ್ಟ ವಿಷಯ………………………

( ಸಮಾಜಶಾಸ್ತ್ರ , ರಾಜ್ಯಶಾಸ್ತ್ರ , ಧರ್ಮಶಾಸ್ತ್ರ , ತತ್ತ್ವಶಾಸ್ತ್ರ )

 3. ರಾಧಾಕೃಷ್ಣನ್ ಅವರು ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ ವಿಶ್ವವಿದ್ಯಾನಿಲಯ…………….

( ಬನಾರಸ್ , ಕೇಂಬ್ರಿಡ್ , ಆಕ್ಸ್‌ಫರ್ಡ್ , ಉಸ್ಮಾನಿಯ )

4 , “ ಮಾನವತೆಯೇ ವಿಶ್ವ ಅನುಸರಿಸಬೇಕಾದ ಮಾರ್ಗ ” ಎಂದು ರಾಧಾಕೃಷ್ಣನ್ ಅವರು ರೇಡಿಯೋ ಪ್ರಸಾರ ಭಾಷಣ ಮಾಡಿದ ದೇಶ………………………

( ಇಂಗ್ಲೆಂಡ್ , ಕೆನಡಾ , ಆಮೇರಿಕ , ರಷ್ಯಾ )

5. ಭಾರತ ಮತ್ತು ರಷ್ಯಾದ ಬಾಂಧವ್ಯವನ್ನು ವೃದ್ಧಿಗೊಳಿಸಿದ ರಾಧಾಕೃಷ್ಣನ್ ಅವರನ್ನು ಪ್ರಶಂಸಿಸಿದವರು…………….

( ಮಹಾತ್ಮಗಾಂಧೀಜಿ , ಜವಾಹರಲಾಲ್ ನೆಹರು ಸ್ಟಾಲಿನ್ , ಸಿಇ.ಎಂ , ಜೋಡ್ )

ಸರಿಯುತ್ತರಗಳು ,

I , ಪತ್ನಿ

2. ತತ್ವಶಾಸ್ತ್ರ

3 , ಆಕ್ಸ್ ಫರ್ಡ್

4 ಕಿನಂಶ

5 , ಜವಾಹರಲಾಲ್ ನೆಹರು

9ನೇ ತರಗತಿ ಆದರ್ಶ ಶಿಕ್ಷಕ ಸರ್ವೇಪಲ್ಲಿ ರಾಧಾಕೃಷ್ಣನ್ Notes, Adarsh Shikshak Sarvepalli Radhakrishnan Notes Question Answer Pdf

ಇತರೆ ವಿಷಯಗಳು:

ಧರ್ಮಸಮದೃಷ್ಟಿ ಕನ್ನಡ ನೋಟ್ಸ್‌

ಬೆಡಗಿನ ತಾಣ ಜಯಪುರ ಕನ್ನಡ ನೋಟ್ಸ್

Leave your vote

17 Points
Upvote Downvote

Leave a Reply

Your email address will not be published. Required fields are marked *

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.